
ತೀರ್ಥಹಳ್ಳಿ ಕಾಂಗ್ರೆಸ್ ಸಭೆ ಮುಂದೂಡಿಕೆ — ಇಂದಿನ ಕಾರ್ಯಕ್ರಮ ರದ್ದು
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ, ತೀರ್ಥಹಳ್ಳಿ ವತಿಯಿಂದ ಇಂದು (27-05-2026) “ಬಂಟರ ಭವನ”ದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಭೆಯನ್ನು ಮುಂದೂಡಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಮಧು ಬಂಗಾರಪ್ಪ ಅವರು ತಮ್ಮ ಎಲ್ಲಾ ಸಭೆಗಳನ್ನು ತಾತ್ಕಾಲಿಕವಾಗಿ ಮುಂದೂಡಿರುವ ಹಿನ್ನೆಲೆ, ಇಂದಿನ ಸಭೆಯೂ ರದ್ದುಗೊಂಡಿದೆ.
ಮುಂದಿನ ಸಭೆಯ ದಿನಾಂಕವನ್ನು ಶೀಘ್ರದಲ್ಲೇ ಪಕ್ಷದ ಮುಖಂಡರು ಹಾಗೂ ಪದಾಧಿಕಾರಿಗಳಿಗೆ ತಿಳಿಸಲಾಗುವುದು ಎಂದು ಕಚೇರಿ ಮೂಲಗಳು ಮಾಹಿತಿ ನೀಡಿವೆ.

Leave a Reply