https://malnaddhvani.com

Thirthallinews shivamogganews localnews crimenews spots ripponpetenews hosangaranews sagaranews nrpuranews koppanews

. ಆರ್. ಮಂಜುನಾಥ್ ಗೌಡ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ

ತೀರ್ಥಹಳ್ಳಿ: ರಾಜ್ಯ ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ. ಆರ್. ಮಂಜುನಾಥ್ ಗೌಡ ಅವರ ಅನುದಾನದಲ್ಲಿ ತೀರ್ಥಹಳ್ಳಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ನಿರ್ಮಿಸಲಾದ ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಇಂದು ಲೋಕಾರ್ಪಣೆ ಮಾಡಲಾಯಿತು.

ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿಗಳಲ್ಲಿ ಒಂದಾದ ಕೊಣಂದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿ.ಕೆ. ಸರ್ಕಲ್ನಲ್ಲಿ ಆಟೋ ಚಾಲಕರ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಆಟೋ ನಿಲ್ದಾಣವನ್ನು ಡಾ. ಮಂಜುನಾಥ್ ಗೌಡ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಕೊಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂಭಾಗದಲ್ಲಿ ಸಾರ್ವಜನಿಕರು, ರೋಗಿಗಳು ಹಾಗೂ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ಲೋಕಾರ್ಪಣೆ ಮಾಡಿದರು

ಇದೇ ವೇಳೆ ದೇಮ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಳಲಿಮಕ್ಕಿಯಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣ ಹಾಗೂ ತ್ರಿಯಂಬಕಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲ್ಲತ್ತಿಯಲ್ಲಿ ನಿರ್ಮಿಸಲಾದ ನೂತನ ಬಸ್ ನಿಲ್ದಾಣವನ್ನು ಸಾರ್ವಜನಿಕ ಸೇವೆಗೆ ಸಮರ್ಪಿಸಿದರು.ಇದರ ಜೊತೆಗೆ ದೇಮ್ಲಾಪುರ ಸರ್ಕಲ್ನಲ್ಲಿ ನಿರ್ಮಾಣಗೊಳ್ಳಲಿರುವ ನೂತನ ಆಟೋ ನಿಲ್ದಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ, ಸ್ಥಳೀಯರ ಬಹುಕಾಲದ ಬೇಡಿಕೆಗೆ ಸ್ಪಂದಿಸುವ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮುಡುಬ ರಾಘವೇಂದ್ರ, ಕೆ.ಆರ್. ಪ್ರಕಾಶ್ ಗೌಡ, ಕೆ.ಆರ್. ಪ್ರಸಾದ್ ಗೌಡ, ಆಟೋ ಬಳಗದ ಅಧ್ಯಕ್ಷ ದೇವರಾಜ ಶೆಟ್ಟಿ, ಡಾ. ಸುಂದರೇಶ್, ಯುವ ಕಾಂಗ್ರೆಸ್ ಅಧ್ಯಕ್ಷ ರವೀಶ್ ಕಂಪ, ಸುರೇಶ್ ಹೊಸ್ಕೇರಿ, ಆದರ್ಶ್ ಹುಂಚದಕಟ್ಟೆ, ಲೋಕೇಶ್ ಕರಕುಚ್ಚಿ, ಹುಲ್ಲತ್ತಿ ದಿನೇಶ್, ಸುಕೇಶ್ ಕೊಣಂದೂರು, ಕುರುವಳ್ಳಿ ನಾಗರಾಜ್, ಸಚಿನ್ ಗೌಡ, ವಿಶ್ವನಾಥ್, ರಕ್ಷಿತ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.

ಈ ಅಭಿವೃದ್ಧಿ ಕಾಮಗಾರಿಗಳಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಹಾಗೂ ಆಟೋ ಚಾಲಕರಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತಷ್ಟು ಉತ್ತೇಜನ ದೊರೆಯಲಿದೆ.

Leave a Reply

Your email address will not be published. Required fields are marked *